ಫೇಸ್ ಬುಕ್ ನಲ್ಲಿ ನಟ ಚೇತನ್ ಫೆ.16 ರಂದು ಕೃಷ್ಣ ದಿಕ್ಷೀತ್ ರ ವಿರುದ್ಧ ಪೋಸ್ಟ್ ಹಾಕಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿದ್ದಾರೆ. 21 ನೇ ಶತಮಾನದಲ್ಲೂ ನ್ಯಾಯಮೂರ್ತಿಗಳು ಸ್ತ್ರೀಯರ ಬಗ್ಗೆ ಹೊಂದಿರುವ ದೃಷ್ಟಿಕೋನ ಸರಿಯಲ್ಲ ಎಂಬರ್ಥದಲ್ಲಿ ನಟ ಚೇತನ್ ತೀರಾ ಅವಹೇಳನಕಾರಿಯಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೇ ಅದೇ ನ್ಯಾಯಮೂರ್ತಿಗಳು ಈಗ ಹಿಜಾಬ್ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದಾರೆ ಎಂದು ಪೋಸ್ಟ್ ಹಾಕಿದ್ದರು.
ಇನ್ನೊಂದೆಡೆ ಚೇತನ್ ಬಂಧನದ ಸುದ್ದಿ ತಿಳಿದ ಹಾಗೂ ಮೇಘಾ ಚೇತನ್ ಲೈವ್ ನೋಡಿದ ಚೇತನ್ ಅಭಿಮಾನಿಗಳು ಪೊಲೀಸ್ ಠಾಣೆ ಎದುರು ಜಮಾಯಿಸುತ್ತಿದ್ದಾರೆ. ಪೊಲೀಸ್ ಠಾಣೆಯ ಎದುರು ಸದ್ಯ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರರಾದ ಸ್ಟ್ಯಾನಿ ಪಿಂಟೋ ಮತ್ತು ತಂಡದವರು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು ಮತ್ತು ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡಿದ ಪೊಲೀಸ್ ಇಲಾಖೆಯ ಬಗ್ಗೆ ಮಾತನಾಡಿದರು ಕನ್ನಡಿಯಲ್ಲಿ ಬಂದರೆ ಆದಷ್ಟು ಬೇಗ ನಟ ಚೇತನ್ ರವರನ್ನು ಬಿಡುಗಡೆಗೊಳಿಸಬೇಕು ಎಂದು ತಿಳಿಸಿದರು ಈ ಸಂದರ್ಭದಲ್ಲಿ ಮೇಘಾ ಚೇತನ್ ಹಾಗೂ ಹಲವಾರು ಹೋರಾಟಗಾರರು ಮತ್ತು ಅಭಿಮಾನಿಗಳು ನೆರೆದಿದ್ದರು.
ಈ ಹಿಂದೆ ನಟ ಚೇತನ್ ಬ್ರಾಹ್ಮಣರನ್ನು ನಿಂದಿಸಿ ವಿವಾದಕ್ಕೆ ಗುರಿಯಾಗಿದ್ದರು. ಅಲ್ಲದೇ ಅವರ ವಿರುದ್ಧ ಬಸವನಗುಡಿ ಸೇರಿದಂತೆ ಹಲವೆಡೆ ಪ್ರಕರಣ ದಾಖಲಾಗಿತ್ತು. ಈಗ ಮತ್ತೊಂದು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣೆಯ ಬಳಿ ದಲಿತ ಸಂಘರ್ಷ ಸೇನೆ ಸೇರಿದಂತೆ ಹಲವರು ಪ್ರತಿಭಟನೆಗೆ ಮುಂದಾಗಿದ್ದಾರೆ.
1 Comments
President, Prime Minister, Chief Justice, judges all are human beings. They commit mistakes if they do wrong every citizens in a democratic country have right to criticize. When the Holy, very honest good people are criticized what the police and court do?
ReplyDelete